Follow Us On

WhatsApp Group
Uttara Kannada
Trending

ಲಂಡನ್ ನ ಪ್ರತಿಷ್ಠಿತ ಪರೀಕ್ಷೆಯಲ್ಲಿ ಉತ್ತೀರ್ಣ: ಉತ್ತರಕನ್ನಡಕ್ಕೆ ಹೆಮ್ಮೆ ತಂದ ಅಂಕೋಲಾದ ಹುಡುಗ

ಅಂಕೋಲಾ: ತಾಲೂಕಿನ ಗ್ರಾಮೀಣ ಭಾಗವಾದ ಹೆಗ್ಗಾರದ ಮಹೇಶ ಗಾವಕರ್ ಅವರು ಲಂಡನ್ನಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್ ನ ಎಸಿಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಸ್ಥಳೀಯ ಕನ್ನಡ ಮಾಧ್ಯಮ ಶಾಲೆಯಲ್ಲಿ, ಮಾಧ್ಯಮಿಕ ಶಿಕ್ಷಣವನ್ನು ಗುಳ್ಳಾಪುರದ ಪ್ರೌಢ ಶಾಲೆಯಲ್ಲಿ ಹಾಗೂ ಪದವಿಪೂರ್ವ ಶಿಕ್ಷಣವನ್ನು
ಯಲ್ಲಾಪುರದ ವೈಟಿಎಸ್ ಕಾಲೇಜಿನಲ್ಲಿ ಪೂರೈಸಿದ ಇವರು ಪದವಿ ಶಿಕ್ಷಣವನ್ನು ಬೆಂಗಳೂರಿನ ಕ್ರೈಸ್ಟ್ ಯುನಿವರ್ಸಿಟಿಯಲ್ಲಿ ಮುಗಿಸಿ ಪ್ರಸ್ತುತ ಕೆ.ಪಿ.ಎಂ.ಜಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.

ಉತ್ತಮ ಸಂಗೀತ ಪರಿಣಿತರಾದ ಇವರು ಹಲವಾರು ದಿಗ್ಗಜರೊಂದಿಗೆ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.
ಅಂಕೋಲಾ ತಾಲೂಕಿನ ಹೆಗ್ಗಾರದ ಅನಂತ ಗಾಂವಕರ್ ಹಾಗೂ ಸಾವಿತ್ರಿ ಗಾಂವಕರ್ ಅವರ ಪುತ್ರರಾದ ಇವರಿಗೆ ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ರಾಘವೇಂದ್ರ ಗಾಂವಕರ್ ಶುಭ ಹಾರೈಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ್ ನಾಯಕ ಅಂಕೋಲಾ

Back to top button