ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 52 ಕೋವಿಡ್ ಕೇಸ್ ಗಳು ದಾಖಲಾಗಿವೆ. ಕಾರವಾರ 12, ಅಂಕೋಲಾ 5, ಕುಮಟಾ 8, ಹೊನ್ನಾವರ 14, ಭಟ್ಕಳ 9, ಶಿರಸಿ 2, ಸಿದ್ದಾಪುರ 2 ಕೋವಿಡ್ ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ಇಂದು ಎರಡು ಸಾವಾಗಿದೆ.
ಇನ್ನೊಂದೆಡೆ ಜಿಲ್ಲೆಯ ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ 57 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರ 1, ಅಂಕೋಲಾ 14, ಕುಮಟಾ 20, ಹೊನ್ನಾವರ 10, ಭಟ್ಕಳ 6, ಮತ್ತು ಯಲ್ಲಾಪುರದಲ್ಲಿ ಆರು ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಭಟ್ಕಳ ಮತ್ತು ಕಾರವಾರದಲ್ಲಿ ತಲಾ ಒಂದು ಸಾವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 728ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ನಿಧಾನವಾಗಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕಿದೆ. ಇಲ್ಲದಿದ್ರೆ, ಅಪಾಯವನ್ನು ಮೈಮೇಲೆ ಎಳೆದುಕೊಂಡoತೆ ಎಂದು ಹೇಳಲಾಗುತ್ತಿದೆ. .ಅಂಕೋಲಾ ತಾಲೂಕಿನಲ್ಲಿ ಶುಕ್ರವಾರ 5 ಹೊಸ ಕೊವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ, ಒಟ್ಟೂ 59ಸಕ್ರಿಯ ಪ್ರಕರಣಗಳಿವೆ. ಸೋಂಕು ಮುಕ್ತರಾದ 14 ಜನರನ್ನು ಬಿಡುಗಡೆಗೊಳಿಸಲಾಗಿದೆ . ವಿವಿಧ ಆಸ್ಪತ್ರೆಗಳಲ್ಲಿ 5 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಲಕ್ಷಣವುಳ್ಳ 54ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಈ ವರೆಗೆ ತಾಲೂಕಿನಲ್ಲಿ ಒಟ್ಟು 64 ಜನ ರು ಕರೊನಾದಿಂದ ಮೃತರಾಗಿದ್ದಾರೆ. ಆರಂಭದಿಂದ ಇಲ್ಲಿಯವರೆಗೆ 3367 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ತನ್ನ ಮೊಬೈಲ್ ಸ್ವಿಚ್ ಆಫ್ ಇದೆ ಎಂದು ಹೇಳಿ ಬೇರೆಯವರ ಮೊಬೈಲಿಂದ ಕರೆ ಮಾಡಿದ ಯುವಕ ನಾಪತ್ತೆ
- ತಡರಾತ್ರಿ ಮನೆಗೆ ಆಗಮಿಸಿದ ನಾಗರಹಾವು : ಬುಸ್ ಗುಡುವ ಶಬ್ಬ ಕೇಳಿ ಮನೆಯವರು ಎಚ್ಚರ
- ನಾನೇನು ದನ ಕಾಯಲು ಇಲ್ಲಿಗೆ ಬಂದಿದ್ದೇನಾ? ದೇಶಪಾಂಡೆ ಗರಂ ಆಗಿದ್ದೇಕೆ?
- ಅಡಿಕೆ ಬೆಳೆಗಾರರಿಗೆ ಮತ್ತೊಂದು ಆತಂಕ: ಭೀತಿ ಹುಟ್ಟಿಸಿದ ಚೈನೀಸ್ ವೈರಸ್!
- ರಾಜ್ಯಮಟ್ಟದ ಚದುರಂಗ ಸ್ಪರ್ಧೆ: ಸಿಂಚನಾ ಭಟ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ವಿಸ್ಮಯ ನ್ಯೂಸ್, ಕಾರವಾರ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.