
ಗೋಕರ್ಣ: ಪ್ರವಾಸಕ್ಕೆ ಆಗಮಿಸುವ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಷ್ಟೆ ಎಚ್ಚರಿಕೆ ನೀಡುತ್ತಿದ್ದರೂ, ಈ ಎಚ್ಚರಿಕೆಯನ್ನು ಧಿಕ್ಕರಿಸಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೌದು, ಗೋಕರ್ಣದ ಪ್ಯಾರಡೈಸ್ ಬೀಚ್ ನಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ , ಈಜಲು ತೆರಳಿದ ವೇಳೆ ನೀರಿನ ಸುಳಿಗೆ ಸಿಲುಕಿ ಶವವಾಗಿ ಮರಳಿದ್ದಾನೆ.

ಅದ್ವೈತ್ ಜೈನ್ ಮೃತ ಯುವಕ ಎಂದು ತಿಳಿದುಬಂದಿದೆ.ಈತ ಮುಂಬೈಯಿಂದ ಆರು ಜನ ಸ್ನೇಹಿತರೊಂದಿಗೆ ಗೋಕರ್ಣಕ್ಕೆ ಬಂದಿದ್ದ. ಈಜಲು ಸ್ನೇಹಿತರೊಂದಿಗೆ ತೆರಳಿದ್ದಾಗ ಸಮುದ್ರದ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗೋಕರ್ಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಸ್ಮಯ ನ್ಯೂಸ್ ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಅಂಕೋಲೆ ಶ್ರೀ ಶಾಂತಾದುರ್ಗಾ ದೇವಸ್ಥಾನ ಗೋಪುರದ ಮೇಲ್ಚಾವಣಿಗೆ ತಾಮ್ರದ ಹೊದಿಕೆ: ಕೆಲಸ ಕಾರ್ಯಗಳು ಆರಂಭ
- ಕುಮಟಾ ಬ್ರೌನ್ ವುಡ್ ಗೆ ಏಪ್ರಿಲ್ 9 ರಂದು ವರ್ಷದ ಸಂಭ್ರಮ: ಏಪ್ರಿಲ್ 9ರ ಸಂಜೆ 5.30ಕ್ಕೆ ಮೊದಲ ವಾರ್ಷಿಕೋತ್ಸವ
- ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿದವ್ರಿಗೆ ಅಡಿಕೆ ಸಸಿ ವಿತರಣೆ
- ಜಿಲ್ಲಾ ಮಟ್ಟದ ಪ್ರಥಮ ವರ್ಷದ ಹಾರ್ಡ್ ಬಾಲ್ ಕ್ರಿಕೆಟ್ ಟೂರ್ನಿ: ಕರ್ನಾಟಕ ಆರ್ಯ ಈಡಿಗ ನಾಮಧಾರಿ ಸಂಘ ಅಂಕೋಲಾದಿoದ ಆಯೋಜನೆ
- ನೀಲಗೋಡ ಜಾತ್ರೆ ಯಶಸ್ವಿಯಾಗಿ ಸಂಪನ್ನ: ಯಕ್ಷಿ ಚೌಡೇಶ್ವರಿ ದೇವಿಯ ದರ್ಶನ ಪಡೆದ ಅಪಾರ ಭಕ್ತರು