ಲಾಡ್ಜ್ ಒಂದರ ಎದುರು ನಿಲ್ಲಿಸಿದ್ದ ಪ್ರವಾಸಿಗರೊಬ್ಬರ ದುಬಾರಿ ಬೈಕ್ ಕಳ್ಳತನ ಪ್ರಕರಣ: ಆರೋಪಿಯನ್ನು ಬಂಧಿಸಿದ ಕುಮಟಾ ಪೊಲೀಸರು

ಕುಮಟಾ : ಕುಮಟಾ ತಾಲೂಕಿನ ಲಾಡ್ಜ್ ಒಂದರ ಎದುರು ನಿಲ್ಲಿಸಿದ್ದ ಪ್ರವಾಸಿಗರೊಬ್ಬರ ದುಬಾರಿ ಬೈಕ್ ಬೆಳಗಾಗುವುದರೊಳಗೆ ಮಾಯವಾಗಿತ್ತು.ಇದೀಗ ಕುಮಟಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳ್ಳತನ ಮಾಡಿದ ಆರೋಪಿಯನ್ನು ಕಾರವಾರ ಶಿರವಾಡದ ಆನಂದ (19 ವರ್ಷ) ಎಂದು ತಿಳಿದುಬಂದಿದೆ.379 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಳ್ಳಲಾಗಿತ್ತು.
ಬೆಂಗಳೂರಿನಿಂದ ಪ್ರವಾಸಕ್ಕೆ ಹೊರಟ ಯುವಕರ ತಂಡ ಬೈಕ್ ನಲ್ಲಿ ಕೇರಳವನ್ನೆಲ್ಲಾ ಸುತ್ತಾಡಿ ಗೋಕರ್ಣಕ್ಕೆ ತೆರಳುವ ಉದ್ದೇಶದೊಂದಿಗೆ ಕುಮಟಾಕ್ಕೆ ಆಗಮಿಸಿ, ಇಲ್ಲಿನ ಲಾಡ್ಜ್ ನಲ್ಲಿ ತಂಗಿದ್ದರು. ಆದರೆ ರಾತ್ರಿರೋತ್ರಿ ತಾಲೂಕಿನ ಲಾಡ್ಜ್ ನಿಲ್ಲಿಸಿದ್ದ ಈ ದುಬಾರಿ ಬೈಕ್ ಕಳ್ಳತನವಾಗಿತ್ತು.
ಈ ಕಳ್ಳತನ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಕುಮಟಾ ಠಾಣೆಯ ಪಿ.ಎಸ್.ಐ ರವರುಗಳಾದ
ಆನಂದಮೂರ್ತಿ, ರವಿ ಗುಡ್ಡಿ, ಚಂದ್ರಮತಿ ಪಟಗಾರ ಹಾಗೂ ಸಿಬ್ಬಂದಿಯವರಾದ ಸಿಹೆಚ್ಸಿ-
ದಯಾನಂದ ನಾಯ್ಕ, ಸಿಹೆಚ್ಸಿ ಗಣೇಶ ನಾಯ್ಕ, ಸಿಪಿಸಿ- ಸಂತೋಷ ಬಾಳೇರ, ಸಿಪಿಸಿ- ಕೃಷ್ಣ ಎನ್, ಜೆ, ಸಿಪಿಸಿ- ಬಸವರಾಜ ಜಾಡರ, ಮಾರುತಿ ಗಾಳಪೂಜಿ, ಇವರುಗಳ ತಂಡ ಪ್ರಮುಖ ಪಾತ್ರ ವಹಿಸಿದೆ.
ವಿಸ್ಮಯ ನ್ಯೂಸ್ ಕುಮಟಾ
ಇದನ್ನೂ ಓದಿ : ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು