

ಯುವಕರು ಇತ್ತಿಚಿನ ದಿನಗಳಲ್ಲಿ ಯಾವುದೋ ಸಣ್ಣ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಸಾವಿಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಆತುರದ ನಿರ್ಧಾರಕ್ಕೆ ಬಿದ್ದು ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಡೆ ಇಂಥ ಪ್ರಕರಣ ಕಂಡುಬರುತ್ತಿದೆ.

ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕನೊರ್ವ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿರುವ ಘಟನೆ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ಬುಧುವಾರ ರಾತ್ರಿ ನಡೆದಿದೆ. ಮೃತ ಯುವಕ ಗಣೇಶ ಸುಬ್ರಾಯ್ ನಾಯ್ಕ ಬಸ್ತಿ ಎಣ್ಣೆಬೋಳೆ ದೇವಿಕಾನ ನಿವಾಸಿ ಎಂದು ತಿಳಿದು ಬಂದಿದೆ.

ಈತ ಕೆಲವು ವರ್ಷದಿಂದ ಮುರುಡೇಶ್ವರ ಮುತ್ತೂಟ್ ಫೈನಾನ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಾವುದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಬಸ್ತಿಯ ರೈಲ್ವೆ ಬ್ರಿಡ್ಜ್ ಸಮೀಪ ರೈಲ್ವೆ ಹಳಿಗೆ ತಲೆಕೊಟ್ಟ ವೇಳೆ ಯಾವುದೋ ರೈಲು ಕುತ್ತಿಗೆ ಮದ್ಯ ಹಾದು ಹೋಗಿ ದೇಹದಿಂದ ಕುತ್ತಿಗೆ ಬೇರ್ಪಟ್ಟು ಸಾವನ್ನಪ್ಪಿದ್ದಾನೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ
