Follow Us On

WhatsApp Group
Important
Trending

ಬ್ಯಾಂಕಿಗೆ ಹೋಗಿ ಬರುವುದಾಗಿ ಹೇಳಿದ ಹೋದ ವಿವಾಹಿತ ಮಹಿಳೆ ನಾಪತ್ತೆ: ಈಕೆಯ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡಿ

ಅಂಕೋಲಾ:ಬ್ಯಾಂಕಿಗೆ ಹೋಗಿ ಬರುವುದಾಗಿ ಹೇಳಿ ಹೊರಟ ಮಹಿಳೆ ಮನೆಗೆ ಹಿಂದಿರುಗಿ ಬರದೇ ನಾಪತ್ತೆಯಾದ ಘಟನೆ ಅಂಕೋಲಾ ತಾಲೂಕಿನ ಕೆಳಗಿನ ಮಂಜಗುಣಿಯಲ್ಲಿ ನಡೆದಿದೆ.ಕೆಳಗಿನ ಮಂಜಗುಣಿ ನಿವಾಸಿ ಕಾಂಚನಾ ರಾಜು ತಾಂಡೇಲ್ (29) ಕಾಣೆಯಾದ ಮಹಿಳೆಯಾಗಿದ್ದು , ಬಾಸಗೋಡದ ಬ್ಯಾಂಕಿಗೆ ಹೋಗಿ ಬರುವುದಾಗಿ ಹೇಳಿ ತೆರಳಿದವಳು ಮನೆಗೆ ಮರಳಿ ಬರದೇ ಕಾಣೆಯಾಗಿದ್ದು ಎಲ್ಲಡೆ ಹುಡುಕಿ ಆಕೆಯ ಪತಿ ರಾಜು ಗಣಪತಿ ತಾಂಡೇಲ್  ತನ್ನ ಹೆಂಡತಿಯನ್ನು ಹುಡುಕಿ ಕೊಡಬೇಕು ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅನ್ಯ ಆಕರ್ಷಣೆ,ಕೌಟುಂಬಿಕ ಕಲಹ , ವೈಯಕ್ತಿಕ ಪ್ರತಿಷ್ಠೆ ಮತ್ತಿತರ ಕಾರಣಗಳಿಂದ ತಾಲೂಕಿನಲ್ಲಿ ಇಂತಹ ಹಲವಾರು ಪ್ರಕರಣಗಳು ಘಟಿಸುತ್ತಿವೆ ಎನ್ನಲಾಗಿದ್ದು,ಮಂಜುಗುಣಿ ಮಹಿಳೆ ಕಾಣೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಸ್ಪಷ್ಠ ಮಾಹಿತಿ ದೊರೆತಿಲ್ಲವಾಗಿದ್ದು ಪೊಲೀಸ್ ಇಲಾಖೆಯ ತನಿಖೆಯಿಂದ ಹೆಚ್ಚಿನ ಮಾಹಿತಿಗಳು ತಿಳಿದುಬರಬೇಕಿದೆ. ಈ ಫೋಟೋದಲ್ಲಿರುವ ಮಹಿಳೆ ಕಂಡುಬಂದಲ್ಲಿ ,ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿಕೊಳ್ಳಲಾಗಿದೆ.                   

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button