Follow Us On

WhatsApp Group
Important
Trending

ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವಪತ್ತೆ: ಗುರುತು ಪತ್ತೆಯೇ ಸವಾಲು

ಹೊನ್ನಾವರ: ತಾಲೂಕಿನ ಕವಲಗೇರಿಯ ಗೇರು ತೋಪಿನಲ್ಲಿ ವ್ಯಕ್ತಿಯೊರ್ವನ ಶವ ಗೇರುಮರಕ್ಕೆ ನೇಣು ಬಿಗಿದಕೊಂಡು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಕಳೆದ ಐದಾರು ದಿನಗಳ ಹಿಂದೆಯೆ ವ್ಯಕ್ತಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಶವ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಕೊಳೆತು ದುರ್ನಾತ ಬೀರುತ್ತಿದೆ. ಇದರಿಂದ ವ್ಯಕ್ತಿಯ ಗುರುತು ಪತ್ತೆಹಚ್ಚುವುದು ಸವಾಲಾಗಿದೆ.

ಪ್ಯಾಂಟ್ ,ಶರ್ಟ್, ಕೈಗೆ ವಾಚ್ ಧರಿಸಿದ್ದು, ಶವ ಕೊಳೆತ ಪರಿಣಾಮ ಕ್ರಿಮಿ ಉತ್ಪತ್ತಿಯಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಠಾಣಾ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದಾರೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದಾದರು ತನಿಖೆಯಿಂದ ನಿಖರ ಮಾಹಿತಿ ತಿಳಿಯಲಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button