Follow Us On

WhatsApp Group
Trending

ಹೆದ್ದಾರಿಯಿಂದ ಅಡಿಕೆ ತೋಟಕ್ಕೆ ಉರುಳಿಬಿದ್ದ ಲಾರಿ: ಹೊತ್ತಿ ಉರಿದ ಲಾರಿ

ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ?

ಕುಮಟಾ: ಕಂಟೇನರ್ ಲಾರಿಯೊಂದು ರಸ್ತೆಯಿಂದ ಅಡಿಕೆ ತೋಟಕ್ಕೆ ಉರುಳಿಬಿದ್ದ ಘಟನೆ ತಾಲೂಕಿನ ರಾಷ್ಟಿçÃಯ ಹೆದ್ದಾರಿ ತಂಡ್ರಕುಳಿ ಬಳಿ ನಡೆದಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಹೊತ್ತಿ ಉರಿದಿದೆ.. ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

ಲಾರಿಯಲ್ಲಿ ಅನಾನಸ್ ಸಾಗಿಲಾಗುತ್ತಿತ್ತು ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಅಡಿಕೆ ತೋಟಕ್ಕೆ ಉರುಳಿಬಿದ್ದಿದೆ. ಅಲ್ಲೆ ಪಕ್ಕದಲ್ಲೇ ಮನೆ ಇದ್ದು ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ಕುಮಟಾ ಕಡೆಯಿಂದ ಕಾರವಾರ ಕಡೆಗೆ ಲಾರಿ ತೆರಳುತ್ತಿತ್ತು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button