Follow Us On

WhatsApp Group
Important
Trending

ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಪಾದಚಾರಿ ಸ್ಥಳದಲ್ಲೇ ಸಾವು: ಲಾರಿ ಬಿಟ್ಟು ಸ್ಥಳದಿಂದ ಪರಾರಿಯಾದ ಚಾಲಕ

ಶಿರಸಿ: ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಐದು ರಸ್ತೆ ವೃತ್ತದ ಬಳಿ ನಡೆದಿದೆ. ಮೃತ ವ್ಯಕ್ತಿ ಹೆಗಡೆ ಕಟ್ಟಾ ನಿವಾಸಿ ಎಂದು ತಿಳಿದುಬಂದಿದೆ.ರಸ್ತೆಯ ಸಮೀಪ ಕುಳಿತುಕೊಂಡಿದ್ದ ವ್ಯಕ್ತಿ ಏಕಾಏಕಿ ರಸ್ತೆಗೆ ಬಂದ ಪರಿಣಾಮ ಲಾರಿ ಹರಿದಿದೆ ಎನ್ನಲಾಗಿದೆ. ಘಟನೆ ನೋಡಿ ಸ್ಥಳದಲ್ಲಿದ್ದವರು ಭಯಭೀತಗೊಂಡಿದ್ದಾರೆ. ಸ್ಥಳದಲ್ಲಿ ಜನ ಸೇರುತ್ತಿದ್ದಂತೆ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಐದು ರಸ್ತೆ ವಿಸ್ತಾರವಾಗಿದ್ದು, ಆದರೂ ಈ ಭಾಗದಲ್ಲಿ ಅಪಘಾತ ಮಾತ್ರ ನಿಲ್ಲುತ್ತಿಲ್ಲ. ಶಿರಸಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button