ಕಾರವಾರ: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯಾದ್ಯಂತ ಮುಂಗಾರಿನ ಪರಿಣಾಮ ಹೆಚ್ಚಾಗಲಿದೆ. ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ 5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಮಳೆಯ ಆರ್ಭಟಕ್ಕೆ ನಲುಗಿರುವ ಕರಾವಳಿಯಲ್ಲಿ ಮತ್ತೆ ಐದು ದಿನ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಇಂದಿನ ಪ್ರಮುಖ ಸುದ್ದಿಗಳನ್ನು ಓದಿ: ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಲಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ