ಶಿರಸಿ:ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಕಾರಣದಿಂದ ಸಿದ್ದಾಪುರ ತಾಲೂಕಿನ ಕಾನಸೂರು ಮಾದ್ನಕಳ್ ರಸ್ತೆ ಸಂಪರ್ಕ ಸಂಪೂರ್ಣ ಕಡಿತ ಗೊಂಡಿದೆ.
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
ಈ ಹಿಂದೆ ಇದ್ದ ಸುತುವೆ ಕೆಡವಿ ಹೊಸ ಸೇತುವೆಯನ್ನು ನಿರ್ಮಾಣಮಾಡಲಾಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ಕಾರ್ಯ ಮುಗಿಯದ ಕಾರಣ ಬದಲಿ ವ್ಯವಸ್ಥೆ ಯನ್ನು ಮಾಡಲಾಗಿತ್ತು.
ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಅಘನಾಶಿನಿ ನದಿ ಮೈದುಂಬಿ ಹರಿಯುತ್ತಿದ್ದು ಬದಲಿ ಮಾರ್ಗ ವೂ ಜಲಾವೃತ ವಾಗಿದೆ.ಇದರಿಂದ ಮಾದ್ನಕಳ್,ದೇವಿಸರ, ಗಿರಗಡ್ಡೆ ಸೇರಿ ಹಲವು ಗ್ರಾಮಗಳ ಜನರು ಹಾಗೂ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ವಿಸ್ಮಯ ನ್ಯೂಸ್ ಶಿರಸಿ