Follow Us On

WhatsApp Group
Important
Trending

ಹೆಂಡತಿ, ಮಗನ ಕೊಂದು ಉದ್ಯಮಿ ಆತ್ಮಹತ್ಯೆ? ಮೂವರ ಮೃತದೇಹ ಪತ್ತೆ

ಕಾರವಾರ: ಒಂದೇ ಕುಟುಂಬದ ಮೂವರ ಮೃತದೇಹ ಕಾರವಾರ & ಗೋವಾ ಬಳಿ ಪತ್ತೆಯಾಗಿದ್ದು, ಹೆಂಡತಿ ಮಗನ‌ ಕೊಂದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳನ್ನು ಕಾರವಾರ ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

KFCSC Recruitment: 386 ಹುದ್ದೆಗಳು: 83 ಸಾವಿರದ ವರೆಗೆ ಸಂಬಳ: ಪಿಯುಸಿ, ಪದವಿ ಆದವರು ಅರ್ಜಿ ಸಲ್ಲಿಸಿ

ಮೃತಪಟ್ಟವರನ್ನು ಕಾರವಾರದ ಗೋಪಿಶಿಟ್ಟಾ ಮೂಲದ  ಶ್ಯಾಮ ಪಾಟೀಲ್(45), ಜ್ಯೋತಿ (38) ಇವರ ಮಗ ಧಕ್ಷ (12) ಎಂದು ಗುರುತಿಸಲಾಗಿದೆ.. ಜ್ಯೋತಿ ಹಾಗೂ ಧಕ್ಷ ಅವರ ಮೃತ ದೇಹ ದೇವಭಾಗ ಬೀಚ್ ಬಳಿ ಪತ್ತೆಯಾಗಿದೆ. ಇನ್ನು ಶ್ಯಾಮ ಪಾಟೀಲ್ ಅವರ ಮೃತದೇಹ ಗೋವಾದ ಕುಕ್ಕಳ್ಳಿ ಪಾಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶ್ಯಾಮ್ ಪಾಟೀಲ್ ಕಂಪನಿಗಳಿಗೆ ಕಾರ್ಮಿಕರನ್ನು ಪೂರೈಕೆ ಮಾಡುತ್ತಿದ್ದರು. ಆದರೆ ಸಾಲ ಮಾಡಿಕೊಂಡಿದ್ದ ಅವರು, ಹೆಂಡತಿ ಮಗನನ್ನು ಕಾರವಾರದ ಕಾಳಿ ನದಿಯಲ್ಲಿ ದೂಡಿ ಅವರು ಗೋವಾ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ವಿಸ್ಮಯ ನ್ಯೂಸ್, ಕಾರವಾರ

Back to top button