Follow Us On

WhatsApp Group
Focus News
Trending

Uttara Kannada: ರಸ್ತೆ ಬದಿಯ ಚರಂಡಿಗೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಅವಾಂತರ

ಸಿದ್ದಾಪುರ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉತ್ತರಕನ್ನಡ (Uttara Kannada)ಜಿಲ್ಲೆಯ ಸಿದ್ದಾಪುರ ತಾಲೂಕಿನ ಇಟಗಿಯಲ್ಲಿ ನಡೆದಿದೆ. ಹೊನ್ನೇಗಟಗಿ ಕಡೆಯಿಂದ ಬಿಳಿಗಿ ಕಡೆ ಹೋಗುತ್ತಿದ್ದ ಕಾರಿನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಗಾಯ ನೋವುಗಳು ಸಂಭವಿಸಿಲ್ಲ. ವಿಷಯ ತಿಳಿದ ಸ್ಥಳೀಯ ಸಾರ್ವಜನಿಕರು ವಾಹನವನ್ನು ಮೇಲಕ್ಕೆತ್ತಲು ಸಹಕಾರ ನೀಡಿದ್ದು ಯಾವುದೇ ಹೆಚ್ಚಿನ ಹಾನಿಯಾಗದಂತೆ ವಾಹನವನ್ನು ಮೇಲಕ್ಕೆತ್ತಲಾಗಿದೆ. ಘಟನೆಯಿಂದ ವಾಹನದ ಬಿಡಿ ಭಾಗಗಳಿಗೆ ಹಾನಿ ಉಂಟಾಗಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button