Follow Us On

WhatsApp Group
Important
Trending

ಪ್ರವಾಸಕ್ಕೆ ಬಂದಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಮುರ್ಡೇಶ್ವರ: ಪ್ರವಾಸಕ್ಕೆ ಬಂದಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ ರಕ್ಷಣೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನಿAದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು.

ಕೆಲಸಕ್ಕೆ ಹೋದ ಯುವತಿ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳುಗಿದ್ದು, ಧನುಷ್​ನನ್ನು ನೋಡಿದ ಲೈಫ್ ಗಾರ್ಡ್​ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ.

ವಿಸ್ಮಯ ನ್ಯೂಸ್, ಮುರ್ಡೇಶ್ವರ

Back to top button