ಗುರುವಾರದ ತನಕ ಜಿಲ್ಲೆಯಲ್ಲೂ ಮಳೆ
ಹವಾಮಾನ ಇಲಾಖೆ ಮುನ್ಸೂಚನೆ
ಕಾರವಾರ: ಉತ್ತರಕನ್ನಡ ಜಿಲ್ಲೆ, ದಕ್ಷಿಣಕನ್ನಡ, ಉಡುಪಿ ಸೇರಿ ರಾಜ್ಯದ ಹನ್ನೆರಡು ಜಿಲ್ಲೆಗಳಲ್ಲಿ ಗುರುವಾರದ ತನಕ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಅಕ್ಟೋಬರ್ ಹದಿಮೂರರಿಂದ ಹದಿನೈದು ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಕನ್ನಡ ಸೇರಿದಂತೆ ದಕ್ಷಿಣ ಕನ್ನಡ , ಉಡುಪಿ ಗುರುವಾರ ತನಕ ಭಾರೀ ಮಳೆ ಸಾಧ್ಯತೆ ಇದೆ. ಬಾರೀ ಗಾಳಿ ಬೀಸುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತುಮಕೂರು ಶಿವಮೊಗ್ಗ ಕೊಡಗು ಚಿತ್ರದುರ್ಗ ಚಿಕ್ಕಮಗಳೂರು ಚಿಕ್ಕಬಳ್ಳಾಪುರ ಬಳ್ಳಾರಿ ಗದಗ ಬೆಳಗಾವಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಚಲನಚಿತ್ರ ನಟ ಶಿವರಾಜ್ ಕುಮಾರ್: ಪತ್ನಿಯೊಂದಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಕೆ
- ಕೈಕೊಟ್ಟ ಮತಯಂತ್ರ: ಮತದಾನ ಪ್ರಕ್ರಿಯೆ ತಾಸಿಗೂ ಹೆಚ್ಚು ಕಾಲ ವಿಳಂಬ
- ಆಕಸ್ಮಿಕ ಬೆಂಕಿ: ಒಂದುವರೆ ಎಕರೆಯಷ್ಟು ಅಡಕೆ ತೋಟ ನಾಶ
- Revenue Department Recruitment: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ: 21 ರಿಂದ 42 ಸಾವಿರ ವೇತನ: ಪಿಯುಸಿ ಆದವರು ಅರ್ಜಿ ಸಲ್ಲಿಸಿ
- ಶಿರಸಿಯಲ್ಲಿ ಆರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ