
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ,ಹಲವಾರು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದ ಹಳದೀಪುರ ಬಗ್ರಾಣಿಯ ವಿನಾಯಕ ಶ್ರೀಧರ ಶೇಟ್ ನಿಧನರಾಗಿದ್ದಾರೆ.ನಿನ್ನೆ ಸಂಜೆ ಶಿರಸಿಯಲ್ಲಿರುವ ತಮ್ಮ ಮಾವನ ಮನೆಯಿಂದ ತುರ್ತು ಕೆಲಸದ ನಿಮಿತ್ತ ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ, ರಸ್ತೆಯ ತಿರುವಿನಲ್ಲಿ ವಾಹನವೊಂದು ಇವರ ಬೈಕ್ ಗೆ ಅಪ್ಪಳಿಸಿದ್ದರಿಂದ ವಿನಾಯಕ ತೀವ್ರ ತಲೆಯ ಗಾಯಕ್ಕೆ ಒಳಗಾಗಿದ್ದರು.
ತಕ್ಷಣ ಅವರನ್ನು ಹುಬ್ಬಳ್ಳಿಯ ಕೆ.ಎಂ.ಸಿ.ಆಸ್ಪತ್ರೆಗೆ ಸೇರಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನ ೪ ಗಂಟೆ ವೇಳೆಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವಿನಾಯಕ ಶೇಟ್ ಅವರ ನಿಧನಕ್ಕೆ ಮಾಜಿ ಶಾಸಕರಾದ ಶಾರದಾಮೋಹನ್ ಶೆಟ್ಟಿ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಗದೀಪ್ ತೆಂಗೇರಿ ಸೇರಿ ಹಲವು ಗಣ್ಯರು ಸಂಪಾದ ಸೂಚಿಸಿದ್ದಾರೆ.
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು