
ಶಿರಸಿ: ನಗರದ ಯಲ್ಲಾಪುರ ರಸ್ತೆಯಲ್ಲಿರುವ ಪ್ರಸಿದ್ಧ ಸಾಮ್ರಾಟ ವಸತಿ ಗ್ರಹದ ಕೊನೆಯ ಅಂತಸ್ತಿನ ಮಹಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಸ್ವಲ್ಪ ಮಟ್ಟಿನ ಹಾನಿಯಾಗಿದೆ. ಏಕಾಏಕಿ ಬೆಂಕಿ ಬಿದ್ದಿದ್ದರಿಂದ ಸಾಮ್ರಾಟ ವಸತಿ ಗೃಹದ ಮೊದಲ, ದ್ವಿತೀಯ ಹಾಗು ಕೊನೆಯ ಮಹಡಿಯ ಕೋಣೆಯಲ್ಲಿ ತಂಗಿದ್ದ ಪ್ರವಾಸಿಗರು ಓಡೋಡಿ ಹೊರಗೆ ಬಂದರು. ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರಿಂದ ಸಾಮ್ರಾಟ ಮುಂಭಾಗದ ಮುಖ್ಯರಸ್ತೆಯಲ್ಲಿ ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು ಎನ್ನಲಾಗಿದೆ. ಸತತವಾಗಿ ಪ್ರಯತ್ನಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.
ಬೆಂಕಿಯ ಕೆನ್ನಾಲಿಗೆಗೆ ಕೊನೆಯ ಮಹಡಿಯ ಕೋಣೆಯಲ್ಲಿದ್ದ ಇಲೆಕ್ಟ್ರಿಕಲ್ ಉಪಕರಣ ಸೇರಿದಂತೆ ಹಳೆಯ ಬಿಲ್ ಬುಕ್ ಗಳು ಬೆಂಕಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ cpi ಪ್ರದೀಪ ಬಿ ಯು ಮತ್ತು ಪಿಎಸ್ಆಯ್ ನಂಜಾ ನಾಯ್ಕ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು