Uttara Kannada
Trending
ರಸ್ತೆಯಲ್ಲಿ ನಿಲ್ಲಿಸಿದ್ದ ಬುಲೆಟ್ಗೆ ಬೆಂಕಿ: ಮೀನು ತೆಗೆದುಕೊಂಡು ಬಂದ ಸವಾರನಿಗೆ ಕಾದಿತ್ತು ಶಾಕ್

ಕಾರವಾರ: ರಸ್ತೆಬದಿಯಲ್ಲಿ ಬುಲೆಟ್ ಬೈಕ್ ಇಟ್ಟು, ಮೀನುತರಲು ತೆರಳಿದ್ದ ಸವಾರನಿಗೆ ಶಾಕ್ ಕಾದಿತ್ತು. ಹೌದು, ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೀನು ತರಲು ತೆರಳಿದ್ದ ವೇಳೆ, ಬುಲೆಟ್ಗೆ ಏಕಾಏಕಿ ಬೆಂಕಿ ಹೊತ್ತುಕೊಂಡು, ಧಗಧಗನೆ ಹೊತ್ತಿ ಉರಿದಿದೆ. ಬೈಕ್ನ ಪೆಟ್ರೋಲ್ ಟ್ಯಾಂಕ್ನಲ್ಲಿ ಪೆಟ್ರೋಲ್ ಫುಲ್ ಇದ್ದ ಕಾರಣ, ಬೆಂಕಿ ಕೆನ್ನಾಲಿಗೆ ಚಾಚಿದ್ದು, ಬಹುತೇಕ ಬೈಕಿನ ಭಾಗಗಳು ಸುಟ್ಟು ಭಸ್ಮವಾಗಿದೆ. ಬೈಕ್ಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎನ್ನುವುದು ಇನ್ನೂ ನಿಗೂಢವಾಗಿದೆ. ಕಿಡಿಗೇಡಿಗಳ ಕೃತ್ಯವೇ ಅಥವಾ ತಾಂತ್ರಿಕದೋಷದಿoದ ಬೆಂಕಿ ಕಾಣಿಸಿಕೊಂಡಿತೇ ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ.
ಕಾರವಾರದ ಮಾಜಾಳಿಯ ಗಾಂವಗೇರಿಯಲ್ಲಿ ಈ ಘಟನೆ ನೆಡೆದಿದ್ದು, ಬೈಕಿನ ಬಹುತೇಕ ಭಾಗಗಳು ಸುಟ್ಟು ಕರಕಲಾಗಿದೆ. ಕಾರವಾರದ ನಂದನ್ ರಮಾಕಾಂತ್ ನಾಯ್ಕ ಎನ್ನುವವರಿಗೆ ಸೇರಿದ ಬೈಕ್ ಇದು ಎನ್ನಲಾಗಿದೆ. ಚಿತ್ತಾಕುಲ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಅಂಕೋಲೆ ಶ್ರೀ ಶಾಂತಾದುರ್ಗಾ ದೇವಸ್ಥಾನ ಗೋಪುರದ ಮೇಲ್ಚಾವಣಿಗೆ ತಾಮ್ರದ ಹೊದಿಕೆ: ಕೆಲಸ ಕಾರ್ಯಗಳು ಆರಂಭ
- ಕುಮಟಾ ಬ್ರೌನ್ ವುಡ್ ಗೆ ಏಪ್ರಿಲ್ 9 ರಂದು ವರ್ಷದ ಸಂಭ್ರಮ: ಏಪ್ರಿಲ್ 9ರ ಸಂಜೆ 5.30ಕ್ಕೆ ಮೊದಲ ವಾರ್ಷಿಕೋತ್ಸವ
- ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿದವ್ರಿಗೆ ಅಡಿಕೆ ಸಸಿ ವಿತರಣೆ
- ಜಿಲ್ಲಾ ಮಟ್ಟದ ಪ್ರಥಮ ವರ್ಷದ ಹಾರ್ಡ್ ಬಾಲ್ ಕ್ರಿಕೆಟ್ ಟೂರ್ನಿ: ಕರ್ನಾಟಕ ಆರ್ಯ ಈಡಿಗ ನಾಮಧಾರಿ ಸಂಘ ಅಂಕೋಲಾದಿoದ ಆಯೋಜನೆ
- ನೀಲಗೋಡ ಜಾತ್ರೆ ಯಶಸ್ವಿಯಾಗಿ ಸಂಪನ್ನ: ಯಕ್ಷಿ ಚೌಡೇಶ್ವರಿ ದೇವಿಯ ದರ್ಶನ ಪಡೆದ ಅಪಾರ ಭಕ್ತರು