
ಕಾರವಾರ: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬೆನ್ನಲ್ಲೆ, ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಇಂದು 14 ಕೇಸ್ ದಾಖಲಾಗಿದೆ. ಕಾರವಾರ 5, ಜೋಯ್ಡಾ 3 ಸಿದ್ದಾಪುರ ಒಂದು ಸೇರಿ ಇಂದು ಜಿಲ್ಲೆಯಾದ್ಯಂತ 14 ಕರೊನಾ ಕೇಸ್ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,938ಕ್ಕೆ ಏರಿಕೆಯಾಗಿದೆ.
ಶಿರಸಿಯಲ್ಲಿಂದು ಒಂದು ಕರೊನಾ ಕೇಸ್
ಶಿರಸಿ: ತಾಲೂಕಿನಲ್ಲಿ ಸೋಮವಾರ ಒಂದು ಕರೊನ ಕೇಸ್ ಪತ್ತೆಯಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ.
ಇಂದು ವಿದ್ಯಾನಗರದ ಓರ್ವನಲ್ಲಿ ಕೊರೊನಾ ದೃಢಪಟ್ಟಿದೆ. ಈವರೆಗೆ 1587 ಮಂದಿಯಲ್ಲಿ ಕೊರೊನಾ ದೃಢವಾದಂತಾಗಿದೆ.
ಹೊನ್ನಾವರದಲ್ಲಿ ಒಂದು: ಕುಮಟಾದಲ್ಲಿ ಶೂನ್ಯ
ಹೊನ್ನಾವರ: ತಾಲೂಕಿನಲ್ಲಿ ಇಂದು 1 ಕರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ತಾಲೂಕಿನ ಪಟ್ಟಣ ಪ್ರದೇಶವಾದ ದುರ್ಗಾಕೇರಿಯ 24 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವರು ಇಂದು ಡಿಸ್ಚಾರ್ಜ್ ಆಗಿದ್ದಾರೆ. ವಿವಿಧ ಆಸ್ಪತ್ರೆಯಲ್ಲಿ 2 ಜನರು ಹಾಗೂ ಮನೆಯಲ್ಲಿ 3 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕುಮಟಾ ತಾಲೂಕಾ ವ್ಯಾಪ್ತಿಯಲ್ಲಿ ಯಾವುದೇ ಕರೊನಾ ಸೋಂಕಿತ ಪ್ರಕರಣ ಪಾತ್ತೆಯಾಗಿಲ್ಲವಾಗಿದೆ.
ವಿಸ್ಮಯ ನ್ಯೂಸ್ ಕಾರವಾರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ