
ಕಬ್ಬಿಣದ ರಾಡ್ ನಿಂದ ಬಾಗಲು ಮುರಿದರು
ಪೊಲೀಸರಿಗೆ ಲಭಿಸಿದೆ ಮಹತ್ವದ ಸುಳಿವು
ಕಾರವಾರ: ಚಿನ್ನದ ಅಂಗಡಿಯೊoದಕ್ಕೆ ಕನ್ನ ಹಾಕಿದ ದುಷ್ಕರ್ಮಿಗಳು, ಲಕ್ಷಾಂತರ ಮೌಲ್ಯದ ಬೆಳ್ಳಿಯ ಆಭರಣ ದೋಚಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಕಬ್ಬಿಣದ ರಾಡ್ನಿಂದ ಜ್ಯುವೆಲರಿಯ ಬಾಗಿಲು ಮುರಿದ ಕಳ್ಳರು, ಮೊದಲು ಅಂಗಡಿಯ ಒಳಗಿದ್ದ ಸಿಸಿ ಕ್ಯಾಮರಾವರನ್ನು ತಿರುಗಿಸಿದ್ದಾರೆ. ಅಲ್ಲದೆ ಅದಕ್ಕೆ ಬಟ್ಟೆ ಕಟ್ಟಿ ತಾವು ಮಾಡುತ್ತಿರುವ ದುಷ್ಕೃತ್ಯ ಸೆರೆಯಾಗದಂತೆ ನೋಡಿಕೊಂಡಿದ್ದಾರೆ. ಹೌದು, ಕಬ್ಬಿಣದ ರಾಡ್ನಿಂದ ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರ ಗುಂಪು ಅಂಗಡಿಯಲ್ಲಿದ್ದ ಬೆಳ್ಳಿಯ ವಸ್ತುಗಳನ್ನು ದೋಚಿದೆ. ಆದರೆ, ಕಳ್ಳರು ಎಷ್ಟೆ ಚಾಲಾಕಿಯಾಗಿದ್ದರು, ಹಲವು ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದೆ.
ಪೊಲೀಸರು ಅಂಗಡಿಯ ಸುತ್ತಮುತ್ತದ ಪ್ರದೇಶವನ್ನು ಪರಿಶೀಲಿಸಿದ್ದು, ಇಲ್ಲಿಯ ಸಿಸಿಟಿವಿ ಫುಟೇಜ್ ಕಲೆಹಾಕಿದ್ದಾರೆ. ಈ ವೇಳೆ ಕಳ್ಳರ ಕುರಿತು ಮಹತ್ವದ ಸುಳಿವು ದೊರೆತಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ