ಭಟ್ಕಳ: ತಾಲೂಕಿನ ಮುರುಡೇಶ್ವರದ ಹೊಟೆಲ್ ಹತ್ತಿರ ಗಲಾಟೆ ನಡೆಯುತ್ತಿತ್ತು. ಈ ಕುರಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿ ಗಲಾಟೆ ಮಾಡದಂತೆ ಸೂಚಿಸಿದ ಪೊಲೀಸರನ್ನು ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ತಾಲೂಕಿನ ಮಾವಳ್ಳಿಯ ಕಿಸಗಾರಮಕ್ಕಿ ಖಂಡಕ ನಿವಾಸಿ ಗಣೇಶ ಈಶ್ವರ ನಾಯ್ಕ ಹಾಗೂ ದಿನೇಶ ತಂದೆ ಹನುಮಂತ ನಾಯ್ಕ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮುರುಡೇಶ್ವರ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಕಿರಣ ತಂದೆ ಗಣಪತಿ ತಿಳಗಂಜಿ ದೂರು ದಾಖಲಿಸಿದ್ದಾರೆ. ಎಸೈ ರವೀಂದ್ರ ಬಿರಾದಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ವಿಸ್ಮಯ ಟಿ.ವಿ ಫಲಶೃತಿ: ಹೆದ್ದಾರಿಯಲ್ಲಿ ಹೊಂಡ ಗುಂಡಿ ಮುಚ್ಚುವ ಕಾರ್ಯ ಆರಂಭ
- ಅನಂತ್ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ!
- ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಮುಂದುವರಿಯಲಿರುವ ಶೋಧ ಕಾರ್ಯಾಚರಣೆ
- ಆಟೋದಲ್ಲಿ ಪ್ಯಾಲೆಸ್ತೀನ್ ಬಂಬಲಿಸಿ ಧ್ವಜ: ಕೆಲವೇ ಗಂಟೆಯಲ್ಲಿ ಪೊಲೀಸರು ತೆರವುಗೊಳಿದ್ದು ಏಕೆ?
- ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment