Follow Us On

WhatsApp Group
ಮಾಹಿತಿ
Trending

ಅಖಿಲ ಭಾರತ ಬ್ರಾಹ್ಮಣ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಗೋಕರ್ಣದ ಕುಮಾರ್ ಮಾರ್ಕಾಂಡೆ ಆಯ್ಕೆ

ಗೋಕರ್ಣ: ಅಖಿಲ ಭಾರತ ಬ್ರಾಹ್ಮಣ ಸಂಘದ ಉತ್ತರ ಕನ್ನಡ ಜಿಲ್ಲೆಯ ಅಧ್ಯಕ್ಷರಾಗಿ ಕುಮಟಾ ತಾಲೂಕಿನ ಗೋಕರ್ಣದ ಕುಮಾರ್ ನಾರಾಯಣ ಮಾರ್ಕಾಂಡೆ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ಬ್ರಾಹ್ಮಣ ಸಂಘದ ಪಂಚರಾಜ್ಯ ಪ್ರತಿನಿಧಿಗಳ ಸಂವಾದ ಸಭೆ ಹಾಗೂ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಪದಾಧಿಕಾರಿಗಳ ಸಂವಾದ ಸಮಾರಂಭದಲ್ಲಿ ಈ ಆಯ್ಕೆಯನ್ನು ಘೋಷಿಸಲಾಗಿದೆ.

ಗೋಕರ್ಣದ ವೈದಿಕ ಕುಟುಂಬದಲ್ಲಿ ಜನಿಸಿದ ಕುಮಾರ ಮಾರ್ಕಾಂಡೆ ಅವರು ತಮ್ಮ ಸರಳ, ಸಜ್ಜನಿಕೆಯಿಂದ ಉತ್ತಮ ಹೆಸರು ಗಳಿಸಿದ್ದು,‌ ಸಂಘಟನೆಯಲ್ಲೂ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ಬಿಜೆಪಿಯ ತಾಲೂಕಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ,‌ಸೈ ಎನಿಸಿಕೊಂಡಿದ್ದಾರೆ. ಇವರ ಈ ಎಲ್ಲಾ‌ ಸಾಧನೆ‌ ಪರಿಗಣಿಸಿ ಮಹತ್ವದ ಜವಾಬ್ದಾರಿ ಅರಸಿ ಬಂದಿದೆ.

ವಿಸ್ಮಯ ನ್ಯೂಸ್ ಗೋಕರ್ಣ

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button