ಯಲ್ಲಾಪುರ: ಖಾಸಗಿ ಬಸ್ ನಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಹವಾಲಾ ಹಣ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಯಲ್ಲಾಪುರದ ಜೋಡುಕೆರೆ ಬಳಿ ನಡೆದಿದೆ.
ಗುಜರಾತ್ ಮೂಲದ ದಿನೇಶ ಠಾಕೂರ (34), ಪಂಕಜಕುಮಾರ ಪಟೇಲ್ (40), ಗೋವಿಂದ ಪಟೇಲ್ (50), ಮುಖೇಶ ಪಟೇಲ್ (55), ಉಪೇಂದ್ರ ಪಟೇಲ್ (47) ಬಂಧಿತ ಆರೋಪಿಗಳು. ಬೆಳಗಾವಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎ 51 ಎಎಫ್ 9490 ನಂಬರಿನ ಗಣೇಶ ಟ್ರಾವೆಲ್ಸ್ ಬಸ್ ನಲ್ಲಿ ಸಾಗಿಸುತ್ತಿದ್ದಾಗ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಅದರಂತೆ ಪರಿಶೀಲನೆ ನಡೆಸಿದಾಗ ಹವಾಲ ಹಣದ ಸಹಿತ ಆರೋಪಿಗಳು ಪತ್ತೆಯಾಗಿದ್ದು ಎಲ್ಲರನ್ನು ಬಂಧಿಸಲಾಗಿದೆ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಯಲ್ಲಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ವಿಸ್ಮಯ ಟಿ.ವಿ ಫಲಶೃತಿ: ಹೆದ್ದಾರಿಯಲ್ಲಿ ಹೊಂಡ ಗುಂಡಿ ಮುಚ್ಚುವ ಕಾರ್ಯ ಆರಂಭ
- ಅನಂತ್ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ!
- ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಮುಂದುವರಿಯಲಿರುವ ಶೋಧ ಕಾರ್ಯಾಚರಣೆ
- ಆಟೋದಲ್ಲಿ ಪ್ಯಾಲೆಸ್ತೀನ್ ಬಂಬಲಿಸಿ ಧ್ವಜ: ಕೆಲವೇ ಗಂಟೆಯಲ್ಲಿ ಪೊಲೀಸರು ತೆರವುಗೊಳಿದ್ದು ಏಕೆ?
- ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment