Follow Us On

WhatsApp Group
Uttara Kannada
Trending

ಗೋಕರ್ಣ ಬೀಚಿನಲ್ಲಿ ಕೊಚ್ಚಿ ಹೋಗಿದ್ದ ಮೂವರು ಸಾವು; ಇಬ್ಬರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಗಳಿಗೆ ಸಿಕ್ಕಿ ಕೊಚ್ಚಿ ಹೋಗಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿ ಇಬ್ಬರನ್ನು ರಕ್ಷಣೆ ಮಾಡಿರುವ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಇಂದು ನಡೆದಿದೆ.ಬೆಂಗಳೂರಿನ ಹೆಬ್ಬಗೋಡಿ ತಿರುಪಾಲ್ಯದ ಸುಮಾ (21) ತಿಪ್ಪೇಶ್ ನಾಯಕ್ (20) ಮತ್ತು ರವಿ (35) ಎಂದು ಗುರುತಿಸಲಾಗಿದೆ. ಇನ್ನಿಬ್ಬರನ್ನು ರಕ್ಷಣೆ ಮಾಡಿದ್ದು, ಅಸ್ವಸ್ತಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದವರಾಗಿದ್ದು, ಸ್ನೇಹಿತರೊಂದಿಗೆ ಪ್ರವಾಸಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಸಮುದ್ರದಲ್ಲಿ ಈಜುತ್ತಿದ್ದಾಗ ಒಮ್ಮೇಲೆ ಬಂದ ಅಲೆ ಐವರನ್ನು ಕೊಚ್ಚಿಕೊಂಡು ಹೋಗಿತ್ತು. ತಕ್ಷಣ ಅಲ್ಲಿಯೇ ಇದ್ದ ಬೋಟಿಂಗ್ ಚಡುವಟಿಕೆ ನಡೆಸುವ ಸಿಬ್ಬಂದಿ ರಕ್ಷಣೆಗೆ ದಾವಿಸಿ ಇಬ್ಬರು ರಕ್ಷಣೆ ಮಾಡಿದ್ದಾರೆ. ಮತ್ತೆ ಮೂವರನ್ನು ದಡಕ್ಕೆ ತಂದರಾದರೂ ಅಷ್ಟರಲ್ಲಾಗಲೇ ಪ್ರಾಣಬಿಟ್ಟಿದ್ದರು. ಮೂವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಗೋಕರ್ಣ

Back to top button