Follow Us On

WhatsApp Group
Uttara Kannada
Trending

ಸೌರ ವಿದ್ಯುತ್ & ಸೌರ ವಾಟರ್ ಹೀಟರ್‌ಗಳ ತಂತ್ರಜ್ಞರಿಗೆ 3 ದಿನಗಳ ಕಾಲ ತಾಂತ್ರಿಕತೆ ತರಬೇತಿ

ಕುಮಟಾ: ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಮತ್ತು ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕುಮಟಾ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಸೌರ ವಿದ್ಯುತ್ ಮತ್ತು ಸೌರ ವಾಟರ್ ಹೀಟರ್‌ಗಳ ತಂತ್ರಜ್ಞರಿಗೆ 3 ದಿನಗಳ ಕಾಲ ನಡೆಯಲಿರುವ ತಾಂತ್ರಿಕತೆ ಬಗ್ಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಕುಮಟಾ ತಾಲೂಕಿನ ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಕಾರ್ಯದರ್ಶಿಗಳಾದ ಸುಧಾಕರ ನಾಯಕ ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ನಂತರ ಮಾತನಾಡಿದ ಅವರು, 3 ದಿನಗಳ ಕಾಲ ಕುಮಟಾದ ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್‌ನಲ್ಲಿ ನಡೆಯಲಿರುವ ಈ ಒಂದು ಸೌರ ವಿದ್ಯುತ್ ಮತ್ತು ಸೌರ ವಾಟರ್ ಹೀಟರ್‌ಗಳ ಕುರಿತಾದ ತರಬೇತಿ ಕಾರ್ಯಕ್ರಮದ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಿ. ಕೆನರಾ ಕಾಲೇಜು ಸೊಸೈಟಿಯ ವತಿಯಿಂದ ಎಲ್ಲಾ ರೀತಿಯ ಸಹಾಯ ಸಹಕಾರ ನೀಡಲು ನಾವು ಸಿದ್ಧರಿದ್ದೇವೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷರಾದ ದಿನಕರ ಮಾಧವ ಕಾಮತ್ ಅವರು ಮಾತನಾಡಿ, ಅವಕಾಶ ನಮ್ಮ ಬಾಗಿಲ ಬಳಿ ಬಂದು ಬಾಗಿಲನ್ನು ತಟ್ಟಿದಾಗ ನಾವು ಅದನ್ನು ಸ್ವಾಗತಿಸಬೇಕು. ಅಂತೆಯೆ ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್‌ನ ವಿದ್ಯಾರ್ಥಿಗಳಿಗೂ ಸಹ ಅವಕಾಶ ಬಳಿಬಂದು ನಿಂತಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು. ಈ ವೇಳೆ ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕುಮಟಾ ಇದರ ಪ್ರಾಂಶುಪಾಲರಾದ ರತನ ಯು. ಗಾಂವಕರ್ ಅವರು ಮಾತನಾಡಿ, ನಾವು ಸ್ವಾಲಂಭಿಗಳಾಗಬೇಕೆoದರೆ ನವೀಕರಿಸಬಹುದಾದ ಶಕ್ತಿಯ ಮೇಲೆ ಹೆಚ್ಚಿನ ಓಲವು ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಮುಖ್ಯ ವ್ಯವಸ್ಥಾಪಕರಾದ ಮನೋಹರ ಕಟಗೇರಿ, ಪ್ರಮುಖರಾದ ಪಿ.ಕೆ ಭಟ್, ರವೀಂದ್ರ ಶೇಟ್ಟಿ, ದಯಾನಂದ ಶೆಟ್ ಮುಂತಾದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಯೋಗೇಶ ಮಡಿವಾಳ. ಕುಮಟಾ

Back to top button